Sun. Mar 8th, 2026

ಪವಿತ್ರ ಗಂಗೆಗೆ ನಮಿಸಿ ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಮೋದಿ

Share this with Friends

ಲಕ್ನೋ,ಮೇ.14: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್‌ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ ಮುಖ್ಯಮಂತ್ರಿಗಳು ಮೋದಿಗೆ ಸಾಥ್‌ ನೀಡಿದರು.

ನಾಮಪತ್ರ ಸಲ್ಲಿಕೆಗೂ ಮೊದಲು ಪ್ರಧಾನಿ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ನದಿಗೆ ಗಂಗಾ ಆರತಿ ಮಾಡಿದರು.ನಂತರ ವಾರಣಾಸಿ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ‌ ಅಧ್ಯಕ್ಷ ಜೆ.ಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ಯೋಗಿ ಆದಿತ್ಯನಾಥ್, ಏಕನಾಥ್ ಶಿಂಧೆ, ಕಾನ್ರಾಡ್ ಸಂಗ್ಮಾ, ಪ್ರಫುಲ್ ಪಟೇಲ್, ರಾಮದಾಸ್ ಅಠವಾಲೆ, ಹರ್ದೀಪ್ ಪುರಿ, ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್, ಜಿತನ್ ರಾಮ್ ಮಾಂಝಿ, ಉಪೇಂದ್ರ ಕುಶ್ವಾಹ, ಸಂಜಯ್ ನಿಶಾದ್, ಅನುಪ್ರಿಯಾ ಪಟೇಲ್, ಓಂಪ್ರಕಾಶ್ ರಾಜಭರ್, ಜಯಂತ್ ಚೌಧರಿ, ಅಂಬುಮಣಿ ರಾಮದಾಸ್, ಜಿಕೆ ವಾಸನ್, ದೇವನಾಥನ್ ಯಾದವ್, ತುಶಾರ್ ವೆಲ್ಲಪ್ಪಲ್ಲಿ, ಅತುಲ್ ಬೋರಾ, ಪ್ರಮೋದ್ ಬೋರೋ, ಪಶುಪತಿ ಪಾರಸ್ ಮತ್ತು ಭೂಪೇಂದ್ರ ಚೌಧರಿ ಸಾಥ್‌ ನೀಡಿದರು.

ಇಂದು ಗಂಗಾ ಸಪ್ತಮಿ, ಹಿಂದೂಗಳ ಪಾಲಿಗೆ ಪವಿತ್ರವಾದ ದಿನ, ಗಂಗೆ ಜನಿಸಿದಳು ಎಂಬ ನಂಬಿಕೆಯಿದೆ. ಗಂಗಾ ಸಪ್ತಮಿಯಂದು ಶುಭ ಅಭಿಜಿನ್ ಲಗ್ನದಲ್ಲಿ ನಾಮಪತ್ರ ಸಲ್ಲಿಸುವುದು ಶ್ರೇಯಸ್ಸು ಎಂದು ಪಂಡಿತ್ ಗಣೇಶ್ವರ್ ಶಾಸ್ತ್ರಿ ಸೂಚಿಸಿದ ಹಿನ್ನೆಲೆಯಲ್ಲಿ ಇಂದು ಮೋದಿ ನಾಮಪತ್ರ ಸಲ್ಲಿಸಿದ್ದಾರೆ.


Share this with Friends

Related Post