Sat. Apr 19th, 2025

ಭಯೋತ್ಪಾದನ ಕೃತ್ಯಕ್ಕೆ ಸಹಕಾರ: ಆರೋಪಿ ಮೈಸೂರಿನಲ್ಲಿ ಅರೆಸ್ಟ್‌

Share this with Friends


ಮೈಸೂರು,ಮೇ.16: ಭಯೋತ್ಪಾದನ ಕೃತ್ಯಕ್ಕೆ ಸಹಕಾರ ನೀಡುತ್ತಿದ್ದ ಆರೋಪದಡಿ ಮೈಸೂರಿನಲ್ಲಿ ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.

ಮೈಸೂರಿನ‌ ರಾಜೀವ್ ನಗರದಲ್ಲಿ ನೆಲೆಸಿದ್ದ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ದಾಳಿ ವೇಳೆ ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್‌ಡ್ರೈವ್ ಮೊದಲಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

2014ರಲ್ಲಿ ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪ ಈತನ ಮೇಲಿದೆ.

ಶ್ರೀಲಂಕಾ ಪ್ರಜೆ ಮೊಹಮ್ಮದ್ ಸಕೀರ್ ಹುಸೇನ್ ಹಾಗೂ ಕೊಲಂಬೋದಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರ ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲೇ ಬಂಧಿಸಿದ್ದರು.

ಇವರಿಗೆ ಭಾರತದ ನಕಲಿ ನೋಟು ಪೂರೈಸುವ ಮೂಲಕ ಭಯೋತ್ಪಾದನ ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ನೂರುದ್ದೀನ್ ವಿರುದ್ಧ ಪ್ರಕರಣ ದಾಖಲಾಗಿತ್ತು.

2023ರ ಆಗಸ್ಟ್‌ನಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ನೂರುದ್ದೀನ್ ಚೆನ್ನೈನ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಆದ್ದರಿಂದ ನೂರುದ್ದೀನ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು, ಆತನ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿತ್ತು. ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಎನ್‌ಐಎ ಯಶಸ್ವಿಯಾಗಿದೆ.


Share this with Friends

Related Post