Wed. Jul 22nd, 2026

ಚುನಾವಣಾ ಫಲಿತಾಂಶ ಹಿನ್ನೆಲೆ ಹೆಚ್‍ಡಿಕೆ ವಿಶೇಷ ಪೂಜೆ

Share this with Friends

ಬೆಂಗಳೂರು,ಜೂ.4: ಲೋಕಸಭಾ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮಠದ ಆವರಣದಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಡಾ.ನಿರ್ಮಲಾನಂದ ಶ್ರೀಗಳ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ವಿಶೇಷ ಮಂಗಳಾರತಿ ಮಾಡಿಸಿ, ಶ್ರೀಗಳ ಆಶೀರ್ವಾದ ಪಡೆದುಕೊಂಡರು.


Share this with Friends

Related Post