Sun. Apr 20th, 2025

ಬಿಬಿಎಂಪಿ ವಿಶೇಷ ಆಯುಕ್ತರಾಗಿ ಸೂರಲ್ಕರ್ ವಿಕಾಸ್ ಕಿಶೋರ್ ನೇಮಕ

Share this with Friends

ಬೆಂಗಳೂರು, ಜು.3: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಸೂರಲ್ಕರ್ ವಿಕಾಸ್ ಕಿಶೋರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಬಿಎಂಪಿಗೆ ವರ್ಗಾಯಿಸಲಾಗಿದೆ

ಮುಂದಿನ ಆದೇಶದವರೆಗೆ ಬಿಬಿಎಂಪಿ ವಿಶೇಷ ಆಯುಕ್ತರಾಗಿ (ಆರೋಗ್ಯ), ಸೂರಲ್ಕರ್ ವಿಕಾಸ್ ಕಿಶೋರ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ‌

ಐಪಿಎಸ್ ಅಧಿಕಾರಿ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರನ್ನಾಗಿ ನಿಯೋಜಿಸಲಾಗಿದ್ದು ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಕೂಡಾ ನಿಂಬಾಳ್ಕರ್ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.


Share this with Friends

Related Post