ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸಿರವಾರ ಪಟ್ಟಣದಲ್ಲಿ ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸಿರವಾರ ಪಟ್ಟಣದ ನಿವಾಸಿ ಆರೋಪಿ ಆಕಾಶ್(23) ಬಂಧಿತ ಆರೋಪಿ ಎಂದು ಹೇಳಲಾಗಿದೆ.
ಜನವರಿ 31 ರಂದು ಸಿರವಾರದಲ್ಲಿ ಟಿಪ್ಪು ಭಾವಚಿತ್ರಕ್ಕೆ ಅವಮಾನ ಮಾಡಲಾಗಿತ್ತು. ಪಟ್ಟಣದ ಮಟನ್ ಮಾರ್ಕೆಟ್ ಸಮೀಪ ಇರುವ ಟಿಪ್ಪು ಸರ್ಕಲ್ ನಲ್ಲಿ ಹಾಕಲಾಗಿದ್ದ ಟಿಪ್ಪು ಭಾವಚಿತ್ರಕ್ಕೆ ಕಿಡಿಗೇಡಿಗಳು ರಾತ್ರೋರಾತ್ರಿ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು .ಸಿರವಾರ ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದರು.
- ರಾಜಕೀಯ ವಲಯದಲ್ಲಿ ಭಾರಿ ಸಂಚಲನ: ನಾಳೆಯೇ ಹೊಸ ಸಚಿವರ ಪ್ರಮಾಣ ವಚನ?; ಸರ್ಕಾರದ ಅಧಿಕೃತ ಪತ್ರದ ರಹಸ್ಯ ಬಯಲು!
- ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಚಿವ ಈಶ್ವರ ಖಂಡ್ರೆ: ಗ್ರಾ.ಪಂ ಅಭಿವೃದ್ಧಿಗೆ ₹2,186 ಕೋಟಿ ಬಿಡುಗಡೆಗೆ ಮನವಿ!
- ಅಧಿಕಾರಿಗಳ ಮೇಲಿನ ಹಲ್ಲೆ ಸಹಿಸಲ್ಲ, ಪುಂಡರ ವಿರುದ್ಧ ಕೊಲೆ ಯತ್ನ ಕೇಸ್: ಶಿವಾಜಿನಗರ ಘಟನೆಗೆ ಸಚಿವ ಕೃಷ್ಣಬೈರೇಗೌಡ ಕಿಡಿ..!
- ಆರ್ಟ್ ಆಫ್ ಲಿವಿಂಗ್ ಭೂಮಿ ವಿವಾದಕ್ಕೆ ಎಸ್ಐಟಿ ತನಿಖೆ; ಬ್ಯಾಕ್ಲಾಗ್ ಹುದ್ದೆ ಭರ್ತಿಗೆ ಪರಮೇಶ್ವರ್ ಆದೇಶ!
- ವಿದ್ಯಾರ್ಥಿಗಳ ಬೆನ್ನಿಗೆ ನಿಂತ ನಟಿ ರಮ್ಯಾ: ಧರ್ಮೇಂದ್ರ ಪ್ರಧಾನ್ ಹಾಗೂ ಅಮಿತ್ ಶಾ ರಾಜೀನಾಮೆಗೆ ಆಗ್ರಹ..!
ಆರೋಪಿಗಳ ಬಂಧನಕ್ಕೆ ಎಸ್.ಪಿ. ನಿಖಿಲ್ ಎರಡು ವಿಶೇಷ ತಂಡ ರಚಿಸಿದ್ದರು. ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆಕಾಶ್ ಕೃತ್ಯವೆಸಗಿರುವುದು ಗೊತ್ತಾಗಿದೆ.

