Sun. Apr 6th, 2025

ಕೆರೆಗೆ ಹಾರಿ ಯೋಧ ಆತ್ಮಹತ್ಯೆ

Share this with Friends

ಬೆಳಗಾವಿ: ರಜೆಗೆ ಊರಿಗೆ ಬಂದಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ ಎಂಬ ಗ್ರಾಮದಲ್ಲಿ ನಡೆದಿದೆ.

ನರೇಶ್ ಅಗಸರ (28) ಆತ್ಮಹತ್ಯೆ ಮಾಡಿಕೊಂಡಿರುವ ಯೋಧ.

ಅವರು ಕಳೆದ 4 ವರ್ಷಗಳಿಂದ ಭಾರೀತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 20 ದಿನಗಳ ಹಿಂದೆ ನರೇಶ್ ರಜೆಯ ಮೇಲೆ ಊರಿಗೆ ಬಂದಿದ್ದರು.ಇವತ್ತು ಕರ್ತವ್ಯಕ್ಕೆ ಹೋಗಬೇಕಾಗಿತ್ತು.

ಆದರೆ ಅದೇನಾಯಿತೊ ಯೋಧ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿತ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


Share this with Friends

Related Post