Fri. Mar 6th, 2026

ಧೈರ್ಯ ಇದ್ದರೆ ಮಹಿಳೆ ಏನು ಬೇಕಾದರೂ ಸಾಧಿಸಬಹುದು: ಲಕ್ಷ್ಮೀಹೆಬ್ಬಾಳ್ಕರ್

Share this with Friends

ಬೆಂಗಳೂರು:ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಮುಂದೆ ಬರಬೇಕು ಅದಕ್ಕಾಗಿ ಮಹಿಳೆಗೆ ಬೇಕಿರುವುದು ಧೈರ್ಯ ಒಂದೇ. ಧೈರ್ಯ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಹೇಳಿದರು. ‌

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹಿಳೆಯರ ಕಾರ್ಯಕ್ಷೇತ್ರದ ಕುರಿತು ನಡೆದ 4ನೇ ಸಿಐಐ ಸಮ್ಮೇಳನದಲ್ಲಿ ಮಾತನಾಡಿದ ಸಚಿವರು, ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದೆ ಬರಬೇಕು. ಇದಕ್ಕಾಗಿ ಮಹಿಳಾ ಉದ್ಯಮಿಗಳಿಗೆ ಸಿಐಐ ಉತ್ತಮ ವೇದಿಕೆ ನಿರ್ಮಿಸಿಕೊಟ್ಟಿದೆ .ಮಹಿಳಾ ಉದ್ಯಮಿಗಳಿಗೆ ಯಾವ ರೀತಿ ಪ್ರೋತ್ಸಾಹ, ಪ್ರಚಾರ ನೀಡಬಹುದು. ಅದಕ್ಕೆ ಬೇಕಾದ ಕಾರ್ಯಕ್ರಮಗಳನ್ನು ನಮ್ಮ ಇಲಾಖೆ ವತಿಯಿಂದ ತೆಗೆದುಕೊಂಡು ಬರಲಾಗಿದೆ ಎಂದರು.

ಈ ಹಿಂದೆ ಗಂಡ ಉದ್ಯಮಿಯಾಗಿದ್ದರೆ, ಅವರಿಗೆ ಹೆಂಡತಿ ಸಹಾಯ ಮಾಡುವ ಪದ್ದತಿ ಇತ್ತು. ಆದರೆ, ಇವತ್ತು ಪರಿಸ್ಥಿತಿ ಬದಲಾಗಿದೆ. ಮಹಿಳೆಯರೇ ಉದ್ಯಮಿಗಳಾಗುತ್ತಿದ್ದಾರೆ‌. ಮಹಿಳೆಯರು ಇವತ್ತು ಅಷ್ಟೊಂದು ಧೈರ್ಯವಂತ, ಶಕ್ತಿವಂತರಾಗಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತ ಬೆಳೆಯುತ್ತಿರುವ ಮಧ್ಯೆ, ‌ಮಹಿಳಾ ಉದ್ಯಮಿಗಳು ಮುಂದೆ ಬರುತ್ತಿದ್ದಾರೆ. ಇದು ಅತ್ಯಂತ ಸಂತೋಷದ ವಿಷಯ ಎಂದು ಹೇಳಿದರು.

ನಾನು ಕೂಡ ಎರಡು ಕಾರ್ಖಾನೆ ಮಾಲಕಿಯಾಗಿದ್ದು, ಮಹಿಳಾ ಉದ್ಯಮಿಗಳ ಕಷ್ಟಗಳನ್ನು ಅರಿತಿದ್ದೇನೆ. ಬ್ಯಾಂಕ್ ಬ್ಯಾಲೆನ್ಸ್ ಇದ್ದರಷ್ಟೇ ನಮಗೆ ಬ್ಯಾಂಕ್ ಗಳಲ್ಲಿ ಸಾಲ ಕೊಡುತ್ತಾರೆ. ನಮಗೆ ಬೇಕಿರುವುದು ಧೈರ್ಯ ಒಂದೇ. ಧೈರ್ಯ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

 

ಸಮಾರಂಭದಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಮಹಿಳಾ ಉದ್ಯಮಿಗಳು ಪಾಲ್ಗೊಂಡಿದ್ದರು.


Share this with Friends

Related Post