Fri. Mar 6th, 2026

ಮಲ್ಲೇಶ್ವರ ರೈಲ್ವೆ ನಿಲ್ದಾಣದ ಆಧುನೀಕರಣ ಕಾಮಗಾರಿಗೆ‌ ಶಂಕುಸ್ಥಾಪನೆ

Share this with Friends

ಬೆಂಗಳೂರು, ಫೆ.26: ಅಮೃತ್ ಭಾರತ್ ಯೋಜನೆ ಅಡಿ ನಮ್ಮ ಮಲ್ಲೇಶ್ವರ ರೈಲ್ವೆ ನಿಲ್ದಾಣದ ಆಧುನೀಕರಣ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರು ದೇಶದ 554 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ರಸ್ತೆ ಮೇಲ್ ಸೇತುವೆ ಪುನರಾಭಿವೃದ್ಧಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು

ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದನ್ನು ಮಲ್ಲೇಶ್ವರ ರೈಲ್ವೆ ನಿಲ್ದಾಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಬಿಜೆಪಿಯ ಪ್ರಮುಖರು ಹಾಜರಿದ್ದು ವೀಕ್ಷಿಸಿದರು.


Share this with Friends

Related Post