Thu. Mar 5th, 2026

ರೈತರ ಮೇಲೆ ಗೋಲಿಬಾರ್ ಮಾಡಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Share this with Friends

ಬೆಳಗಾವಿ:ರೈತರ ಹೋರಾಟ‌ ಹತ್ತಿಕ್ಕಲು ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ ಎಂದು ಬಿಜೆಪಿಯ ರೈತಪರ ಹೋರಾಟವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ

ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ರೈತರ ಪರವಾಗಿ ಬಿಜೆಪಿ ಯವರು ಏನು‌ ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.‌

ಬಿಜೆಪಿ ಅವರಿಗೆ ನಾಚಿಕೆ ಆಗಬೇಕು. ರೈತರ ಮೇಲೆ ಗೋಲಿಬಾರ್ ಮಾಡಿಸಿದವರು,  ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಚಳಿ, ಮಳೆಯಲ್ಲಿ ನೂರಾರು ಜನ ರೈತರು ಸತ್ತರು. ರೈತರ ಮೇಲೆ ಗಾಡಿ ಹತ್ತಿಸಿದವರು ಯಾರು? ಈಗ ರೈತರ ಬಗ್ಗೆ ಮಾತನಾಡಲು ಬರುತ್ತಾರೆ, ಅವರಿಗೆ ನಾಚಿಕೆಯಾಗಬೇಕು.ಕಾಂಗ್ರೆಸ್ ಪಕ್ಷವಾಗಲಿ, ನಾನಾಗಲಿ, ಎಲ್ಲರೂ ರೈತರ ಪರ ಇದ್ದೇವೆ ಎಂದರು.‌

ನಮ್ಮದು ಜಾತ್ಯತೀತ ಸರ್ಕಾರ:

ನಮ್ಮದು ಜಾತ್ಯತೀತ ಸರ್ಕಾರ, ಬಸವಣ್ಣ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಟಿಪ್ಪು ಜಯಂತಿಯನ್ನು ಯಾಕೆ ವಿವಾದ ಮಾಡಲಾಗುತ್ತಿದೆ ಎಂದು‌ ತಿಳಿಯುತ್ತಿಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕೆನ್ನುವುದು ನಮ್ಮ ನಿಲುವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


Share this with Friends

Related Post