ಬೆಂಗಳೂರು: ರಾಜಧಾನಿ ಬೆಂಗಳೂರಿನ ಎಲ್ಲಾ ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಧೂಮಪಾನ ಸ್ಥಳ ತೆರವು ಮಾಡುವಂತೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಕಟ್ಟು ನಿಟ್ಟಾಗಿ ನಿಯಮ ಪಾಲನೆಗೆ ಆದೇಶ ನೀಡಲಾಗಿದ್ದು, ಹೋಟೆಲ್, ಪಬ್ , ರೆಸ್ಟೋರೆಂಟ್ ಗಳಲ್ಲಿ ಅಕ್ರಮವಾಗಿ ನಿಗದಿ ಪಡಿಸಿರುವ ಧೂಮಪಾನ ಸ್ಥಳ ಅಥವಾ ಕೊಠಡಿಗಳನ್ನು ತೆರವು ಮಾಡಬೇಕು.
ಬಿಬಿಎಂಪಿ ಎನ್ ಒಸಿಯಲ್ಲಿ ತಿಳಿಸಿದ ಮಾನದಂಡದಂತೆ ಸ್ಥಳಗಳನ್ನು ನಿಗದಿ ಮಾಡಬೇಕು ಎಂದು ತಿಳಿಸಲಾಗಿದೆ. ಇಂತಹ ಸ್ಥಳಗಳಲ್ಲಿ ಆಹಾರ, ನೀರು, ಪಾನಿಯ, ತಂಬಾಕು ಉತ್ಪನ್ನ ಒದಗಿಸುವುದು, ಪೂರೈಸುವುದನ್ನು ನಿಷೇಧಿಸಲಾಗಿದೆ. ಸೂಚನಾ ಫಲಕಗಳನ್ನು ಅಳವಡಿಸಿ ಜಾಗೃತಿ ಮೂಡಿಸಬೇಕು. ಧೂಮಪಾನಿಗಳಲ್ಲದವರನ್ನು ಹಾನಿಕಾರ ತಂಬಾಕು ಹೊಗೆಯಿಂದ ರಕ್ಷಿಸುವುದು ಮುಖ್ಯ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
- ಬಮೂಲ್ ಗುಣಮಟ್ಟ ವೃದ್ಧಿಗೆ ಡಿ.ಕೆ. ಸುರೇಶ್ ಮಾಸ್ಟರ್ ಪ್ಲಾನ್: ಉತ್ಪಾದನಾ ಘಟಕಗಳ ತಾಂತ್ರಿಕ ಪರಿಶೀಲನೆ
- ರಾಮನಗರ – ಕನಕಪುರ ಜನತೆಗೆ ಸಾರಿಗೆ ಸಂಭ್ರಮ: ಬಿಎಂಟಿಸಿ ‘ವಜ್ರ ವಿಸ್ತಾರ’ ಎಸಿ ಬಸ್ ಸಂಚಾರಕ್ಕೆ ಚಾಲನೆ
- ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಅದ್ಧೂರಿ ಆರತಕ್ಷತೆ: ನವದಂಪತಿಗೆ ಡಿ.ಕೆ. ಶಿವಕುಮಾರ್ ಶುಭ ಹಾರೈಕೆ
- ಅಭಿವೃದ್ಧಿ ಮರೆತ ಕಾಂಗ್ರೆಸ್ ಸರ್ಕಾರ: ಬಿ.ವೈ.ವಿಜಯೇಂದ್ರ ವಾಗ್ದಾಳಿ
- ಸಗಟು ಬಟ್ಟೆ ವ್ಯಾಪಾರಿಗಳ ಸಮಸ್ಯೆ: ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಮಹತ್ವದ ಸಭೆ

