ಬೆಂಗಳೂರು: ರಾಜಧಾನಿ ಬೆಂಗಳೂರಿನ ಎಲ್ಲಾ ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಧೂಮಪಾನ ಸ್ಥಳ ತೆರವು ಮಾಡುವಂತೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಕಟ್ಟು ನಿಟ್ಟಾಗಿ ನಿಯಮ ಪಾಲನೆಗೆ ಆದೇಶ ನೀಡಲಾಗಿದ್ದು, ಹೋಟೆಲ್, ಪಬ್ , ರೆಸ್ಟೋರೆಂಟ್ ಗಳಲ್ಲಿ ಅಕ್ರಮವಾಗಿ ನಿಗದಿ ಪಡಿಸಿರುವ ಧೂಮಪಾನ ಸ್ಥಳ ಅಥವಾ ಕೊಠಡಿಗಳನ್ನು ತೆರವು ಮಾಡಬೇಕು.
ಬಿಬಿಎಂಪಿ ಎನ್ ಒಸಿಯಲ್ಲಿ ತಿಳಿಸಿದ ಮಾನದಂಡದಂತೆ ಸ್ಥಳಗಳನ್ನು ನಿಗದಿ ಮಾಡಬೇಕು ಎಂದು ತಿಳಿಸಲಾಗಿದೆ. ಇಂತಹ ಸ್ಥಳಗಳಲ್ಲಿ ಆಹಾರ, ನೀರು, ಪಾನಿಯ, ತಂಬಾಕು ಉತ್ಪನ್ನ ಒದಗಿಸುವುದು, ಪೂರೈಸುವುದನ್ನು ನಿಷೇಧಿಸಲಾಗಿದೆ. ಸೂಚನಾ ಫಲಕಗಳನ್ನು ಅಳವಡಿಸಿ ಜಾಗೃತಿ ಮೂಡಿಸಬೇಕು. ಧೂಮಪಾನಿಗಳಲ್ಲದವರನ್ನು ಹಾನಿಕಾರ ತಂಬಾಕು ಹೊಗೆಯಿಂದ ರಕ್ಷಿಸುವುದು ಮುಖ್ಯ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
- ಯೂನಿಸಿಸ್ ಐಟಿ ಸಂಸ್ಥೆ ಮತ್ತು ದಿ ಫಾರ್ವಡ್ ಫೌಂಡೇಶನ್ ಸಹಯೋಗದಲ್ಲಿ ರಕ್ತದಾನ ಶಿಬಿರ, 224 ಯೂನಿಟ್ ರಕ್ತ ಸಂಗ್ರಹ
- KSDMF : ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ, ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್’ಗೆ ಸನ್ಮಾನ, ಡಿಜಿಟಲ್ ಮಾಧ್ಯಮ ಸಮ್ಮೇಳನಕ್ಕೆ ಚಿಂತನೆ
- KSDMF : ಡಿಜಿಟಲ್ ಮೀಡಿಯಾ ಫೋರಂನಿಂದ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ ಮತ್ತು ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರಿಗೆ ಅಭಿನಂದನಾ ಸಮಾರಂಭ
- ಮಂಡ್ಯದ ಗಂಡು ಸೇರಿದಂತೆ ರೆಬಲ್ ಸ್ಟಾರ್ ಅಂಬರೀಶ್ ಅವರ 23 ಚಿತ್ರಗಳ ನಿರ್ದೇಶಕ ಎ.ಟಿ ರಘು ನಿಧನ
- ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಬಲಕ್ಕೆ ನಿಂತ ಸಚಿವ ರಾಮಲಿಂಗಾರೆಡ್ಡಿ