ಬೆಂಗಳೂರು: ರಾಜಧಾನಿ ಬೆಂಗಳೂರಿನ ಎಲ್ಲಾ ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಧೂಮಪಾನ ಸ್ಥಳ ತೆರವು ಮಾಡುವಂತೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಕಟ್ಟು ನಿಟ್ಟಾಗಿ ನಿಯಮ ಪಾಲನೆಗೆ ಆದೇಶ ನೀಡಲಾಗಿದ್ದು, ಹೋಟೆಲ್, ಪಬ್ , ರೆಸ್ಟೋರೆಂಟ್ ಗಳಲ್ಲಿ ಅಕ್ರಮವಾಗಿ ನಿಗದಿ ಪಡಿಸಿರುವ ಧೂಮಪಾನ ಸ್ಥಳ ಅಥವಾ ಕೊಠಡಿಗಳನ್ನು ತೆರವು ಮಾಡಬೇಕು.
ಬಿಬಿಎಂಪಿ ಎನ್ ಒಸಿಯಲ್ಲಿ ತಿಳಿಸಿದ ಮಾನದಂಡದಂತೆ ಸ್ಥಳಗಳನ್ನು ನಿಗದಿ ಮಾಡಬೇಕು ಎಂದು ತಿಳಿಸಲಾಗಿದೆ. ಇಂತಹ ಸ್ಥಳಗಳಲ್ಲಿ ಆಹಾರ, ನೀರು, ಪಾನಿಯ, ತಂಬಾಕು ಉತ್ಪನ್ನ ಒದಗಿಸುವುದು, ಪೂರೈಸುವುದನ್ನು ನಿಷೇಧಿಸಲಾಗಿದೆ. ಸೂಚನಾ ಫಲಕಗಳನ್ನು ಅಳವಡಿಸಿ ಜಾಗೃತಿ ಮೂಡಿಸಬೇಕು. ಧೂಮಪಾನಿಗಳಲ್ಲದವರನ್ನು ಹಾನಿಕಾರ ತಂಬಾಕು ಹೊಗೆಯಿಂದ ರಕ್ಷಿಸುವುದು ಮುಖ್ಯ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
- ದೆಹಲಿಯಲ್ಲಿ ವಿದ್ಯಾರ್ಥಿಗಳ ಪರ ಕಾಂಗ್ರೆಸ್ ಸಿಂಹಗರ್ಜನೆ: ಪ್ರಧಾನಿ ನಿವಾಸದ ಎದುರು ರಾಹುಲ್-ಖರ್ಗೆ ಬೃಹತ್ ಪ್ರತಿಭಟನೆ; ಸಿಎಂ ಡಿ.ಕೆ.ಶಿವಕುಮಾರ್ ಭಾಗಿ!
- ರಾಜಕೀಯ ವಲಯದಲ್ಲಿ ಭಾರಿ ಸಂಚಲನ: ನಾಳೆಯೇ ಹೊಸ ಸಚಿವರ ಪ್ರಮಾಣ ವಚನ?; ಸರ್ಕಾರದ ಅಧಿಕೃತ ಪತ್ರದ ರಹಸ್ಯ ಬಯಲು!
- ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಚಿವ ಈಶ್ವರ ಖಂಡ್ರೆ: ಗ್ರಾ.ಪಂ ಅಭಿವೃದ್ಧಿಗೆ ₹2,186 ಕೋಟಿ ಬಿಡುಗಡೆಗೆ ಮನವಿ!
- ಅಧಿಕಾರಿಗಳ ಮೇಲಿನ ಹಲ್ಲೆ ಸಹಿಸಲ್ಲ, ಪುಂಡರ ವಿರುದ್ಧ ಕೊಲೆ ಯತ್ನ ಕೇಸ್: ಶಿವಾಜಿನಗರ ಘಟನೆಗೆ ಸಚಿವ ಕೃಷ್ಣಬೈರೇಗೌಡ ಕಿಡಿ..!
- ಆರ್ಟ್ ಆಫ್ ಲಿವಿಂಗ್ ಭೂಮಿ ವಿವಾದಕ್ಕೆ ಎಸ್ಐಟಿ ತನಿಖೆ; ಬ್ಯಾಕ್ಲಾಗ್ ಹುದ್ದೆ ಭರ್ತಿಗೆ ಪರಮೇಶ್ವರ್ ಆದೇಶ!

