ಬೆಂಗಳೂರು: ರಾಜಧಾನಿ ಬೆಂಗಳೂರಿನ ಎಲ್ಲಾ ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಧೂಮಪಾನ ಸ್ಥಳ ತೆರವು ಮಾಡುವಂತೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಕಟ್ಟು ನಿಟ್ಟಾಗಿ ನಿಯಮ ಪಾಲನೆಗೆ ಆದೇಶ ನೀಡಲಾಗಿದ್ದು, ಹೋಟೆಲ್, ಪಬ್ , ರೆಸ್ಟೋರೆಂಟ್ ಗಳಲ್ಲಿ ಅಕ್ರಮವಾಗಿ ನಿಗದಿ ಪಡಿಸಿರುವ ಧೂಮಪಾನ ಸ್ಥಳ ಅಥವಾ ಕೊಠಡಿಗಳನ್ನು ತೆರವು ಮಾಡಬೇಕು.
ಬಿಬಿಎಂಪಿ ಎನ್ ಒಸಿಯಲ್ಲಿ ತಿಳಿಸಿದ ಮಾನದಂಡದಂತೆ ಸ್ಥಳಗಳನ್ನು ನಿಗದಿ ಮಾಡಬೇಕು ಎಂದು ತಿಳಿಸಲಾಗಿದೆ. ಇಂತಹ ಸ್ಥಳಗಳಲ್ಲಿ ಆಹಾರ, ನೀರು, ಪಾನಿಯ, ತಂಬಾಕು ಉತ್ಪನ್ನ ಒದಗಿಸುವುದು, ಪೂರೈಸುವುದನ್ನು ನಿಷೇಧಿಸಲಾಗಿದೆ. ಸೂಚನಾ ಫಲಕಗಳನ್ನು ಅಳವಡಿಸಿ ಜಾಗೃತಿ ಮೂಡಿಸಬೇಕು. ಧೂಮಪಾನಿಗಳಲ್ಲದವರನ್ನು ಹಾನಿಕಾರ ತಂಬಾಕು ಹೊಗೆಯಿಂದ ರಕ್ಷಿಸುವುದು ಮುಖ್ಯ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
- ಸರ್ಕಾರಿ ನೌಕರರು 10 ಗಂಟೆಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ: ಸರ್ಕಾರದ ಕಡಕ್ ಆದೇಶ
- ರಾಮಲಿಂಗಾರೆಡ್ಡಿಗೆ ಭರವಸೆ ನೀಡಿದ್ದನ್ನು ಒಪ್ಪಿಕೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
- ಖಾತೆ ಹಂಚಿಕೆ ವಿವಾದ: ಸತೀಶ್ ಜಾರಕಿಹೊಳಿ ಮತ್ತು ಹೆಚ್.ಕೆ. ಪಾಟೀಲ್ ನಡೆಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ
- ಪವನ್ ಖೇರಾ ಆಯ್ಕೆಗೆ ಟಿ.ಎ. ನಾರಾಯಣಗೌಡ ವಿರೋಧ: ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶ
- ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಹಿರಿಯ ಸಚಿವರ ಅಸಮಾಧಾನದ ಬೆನ್ನಲ್ಲೇ ಸಿಎಂ ಡಿ.ಕೆ.ಶಿವಕುಮಾರ್ಗೆ ಬಿ.ವೈ.ವಿಜಯೇಂದ್ರ ಸವಾಲು

