ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸಿರವಾರ ಪಟ್ಟಣದಲ್ಲಿ ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸಿರವಾರ ಪಟ್ಟಣದ ನಿವಾಸಿ ಆರೋಪಿ ಆಕಾಶ್(23) ಬಂಧಿತ ಆರೋಪಿ ಎಂದು ಹೇಳಲಾಗಿದೆ.
ಜನವರಿ 31 ರಂದು ಸಿರವಾರದಲ್ಲಿ ಟಿಪ್ಪು ಭಾವಚಿತ್ರಕ್ಕೆ ಅವಮಾನ ಮಾಡಲಾಗಿತ್ತು. ಪಟ್ಟಣದ ಮಟನ್ ಮಾರ್ಕೆಟ್ ಸಮೀಪ ಇರುವ ಟಿಪ್ಪು ಸರ್ಕಲ್ ನಲ್ಲಿ ಹಾಕಲಾಗಿದ್ದ ಟಿಪ್ಪು ಭಾವಚಿತ್ರಕ್ಕೆ ಕಿಡಿಗೇಡಿಗಳು ರಾತ್ರೋರಾತ್ರಿ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು .ಸಿರವಾರ ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದರು.
- ರಾಜ್ಯಸಭೆ ಚುನಾವಣೆ: ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಆರೋಗ್ಯ ಇಲಾಖೆಯಲ್ಲಿ ಹೊಸ ಸುಧಾರಣೆ: ಎಂಬಿಬಿಎಸ್ ಪದವೀಧರರಿಗೆ ನೇರ ಸಂದರ್ಶನದ ಮೂಲಕ ಉದ್ಯೋಗಾವಕಾಶ ಘೋಷಿಸಿದ ಸಚಿವ ಯು.ಟಿ. ಖಾದರ್
- ರಾಜ್ಯಸಭಾ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮತ್ತು ಮನ್ಸೂರ್ ಅಲಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ
- “ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿದೆಯಂತೆ!”: ಖಾತೆ ಹಂಚಿಕೆ ವಿವಾದದ ಬೆನ್ನಲ್ಲೇ ಆಡಳಿತ ಪಕ್ಷದ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ
- “ಎಂಟು ಬಾರಿ ಗೆದ್ದವರಿಗೇ ಬೆಲೆ ಇಲ್ಲ ಅಂದ್ರೆ ಹೇಗೆ?”: ಖಾತೆ ಹಂಚಿಕೆ ವಿರುದ್ಧ ಸಚಿವ ಕೆ.ಎಚ್. ಮುನಿಯಪ್ಪ ತೀವ್ರ ವಾಗ್ದಾಳಿ!
ಆರೋಪಿಗಳ ಬಂಧನಕ್ಕೆ ಎಸ್.ಪಿ. ನಿಖಿಲ್ ಎರಡು ವಿಶೇಷ ತಂಡ ರಚಿಸಿದ್ದರು. ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆಕಾಶ್ ಕೃತ್ಯವೆಸಗಿರುವುದು ಗೊತ್ತಾಗಿದೆ.

