ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹುನಿರೀಕ್ಷಿತ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಹಿರಿಯ ಜನನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆದ ಅತ್ಯಂತ ಅದ್ಧೂರಿ ಹಾಗೂ ಸಾಂಪ್ರದಾಯಿಕ ಸಮಾರಂಭದಲ್ಲಿ ರಾಜ್ಯಪಾಲರು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಅಪರೂಪದ ಮುಹೂರ್ತದಲ್ಲಿ ಸಂಜೆ 4 ಗಂಟೆ 05 ನಿಮಿಷಕ್ಕೆ ಸರಿಯಾಗಿ ನಡೆದ ಈ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಆರಾಧ್ಯ ದೈವ ವೀರ ಗಂಗಾಧರ ಅಜ್ಜ ಹಾಗೂ ಮೈಲಾರಲಿಂಗನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವೇದಿಕೆಯ ಮೇಲೆ ದೇಶದ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿ ಗಮನ ಸೆಳೆಯಿತು. ಇದಕ್ಕೂ ಮುನ್ನ ವೇದಿಕೆಗೆ ಆಗಮಿಸಿದ ಅವರು ನೆಲಕ್ಕೆ ಅಡ್ಡ ಬಿದ್ದು ರಾಜಕೀಯ ನಾಯಕತ್ವದ ಜವಾಬ್ದಾರಿಗೆ ಗೌರವ ಸಲ್ಲಿಸಿದರು.
ಮುಖ್ಯಮಂತ್ರಿಗಳ ಪ್ರಮಾಣ ವಚನ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ, ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ (DCM) ಪ್ರಮಾಣ ವಚನ ಸ್ವೀಕರಿಸಿದರು. ಇವರ ಬೆನ್ನಲ್ಲೇ ಒಟ್ಟು 12 ಶಾಸಕರು ನೂತನ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಪಡೆದರು. ಈ ಐತಿಹಾಸಿಕ ಸಮಾರಂಭಕ್ಕೆ ರಾಷ್ಟ್ರೀಯ ಮಟ್ಟದ ಪ್ರಮುಖ ರಾಜಕೀಯ ಗಣ್ಯರು, ಮಠಾಧೀಶರು ಹಾಗೂ ಹಿರಿಯ ಮುತ್ಸದ್ದಿ ನಾಯಕರು ಸಾಕ್ಷಿಯಾದರು. ರಾಜ್ಯಾದ್ಯಂತ 230 ಪ್ರಮುಖ ಬಸ್ ನಿಲ್ದಾಣಗಳಲ್ಲಿ ಕಲ್ಪಿಸಲಾಗಿದ್ದ ನೇರ ಪ್ರಸಾರದ ವ್ಯವಸ್ಥೆಯ ಮೂಲಕ ಲಕ್ಷಾಂತರ ಜನಸಾಮಾನ್ಯರು ಈ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಂಡರು.
ಇಂದು ಮುಖ್ಯಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ ಸಚಿವರ ಪೂರ್ಣ ವಿವರ:
ಡಿ.ಕೆ. ಶಿವಕುಮಾರ್ – ಮುಖ್ಯಮಂತ್ರಿ
ಡಾ. ಜಿ. ಪರಮೇಶ್ವರ್ – ಉಪಮುಖ್ಯಮಂತ್ರಿ
ಕೆ.ಎಚ್. ಮುನಿಯಪ್ಪ – ಸಚಿವ
ಕೆ.ಜೆ. ಜಾರ್ಜ್ – ಸಚಿವ
ಎಂ.ಬಿ. ಪಾಟೀಲ್ – ಸಚಿವ
ರಾಮಲಿಂಗಾರೆಡ್ಡಿ – ಸಚಿವ
ಸತೀಶ್ ಜಾರಕಿಹೊಳಿ – ಸಚಿವ
ಕೃಷ್ಣ ಬೈರೇಗೌಡ – ಸಚಿವ
ಪ್ರಿಯಾಂಕ್ ಖರ್ಗೆ – ಸಚಿವ
ಯು.ಟಿ. ಖಾದರ್ – ಸಚಿವ
ಈಶ್ವರ್ ಖಂಡ್ರೆ – ಸಚಿವ
ಯತೀಂದ್ರ ಸಿದ್ದರಾಮಯ್ಯ – ಸಚಿವ
ಬೈರತಿ ಸುರೇಶ್ – ಸಚಿವ
ಶರಣಪ್ರಕಾಶ್ ಪಾಟೀಲ್ – ಸಚಿವ

