Fri. Mar 6th, 2026

ತಮಿಳುನಾಡಿಗೆ ಒಂದು ಹನಿ ನೀರು ಕೂಡ ಬಿಡುತ್ತಿಲ್ಲ : ಸಿಎಂ

Siddaramaiaha
Share this with Friends

ಬೆಂಗಳೂರು: ಬೆಂಗಳೂರು ನಗರವು ತೀವ್ರ ನೀರಿನ ಬಿಕ್ಕಟ್ಟಿನಿಂದ ತತ್ತರಿಸಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗುತ್ತಿದೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ಪ್ರತಿಪಕ್ಷಗಳ ಆರೋಪ ಸುಳ್ಳು ಎಂದಿರುವ ಸಿದ್ದರಾಮಯ್ಯ, ತಮಿಳುನಾಡಿಗೆ ಒಂದೇ ಒಂದು ಹನಿ ನೀರು ಬಿಡುತ್ತಿಲ್ಲ ಎಂದಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳ ಆರೋಪಗಳೆಲ್ಲ ಸುಳ್ಳು. ಈ ಪರಿಸ್ಥಿತಿಯಲ್ಲಿ ನೀರು ಹರಿಯಲು ಯಾರು ಬಿಡುತ್ತಾರೆ? ನಮ್ಮ ಬಳಕೆಗೆ ನೀರು ಉಳಿಸಿಕೊಳ್ಳದೆ ತಮಿಳುನಾಡಿಗೆ ಒಂದು ಹನಿ ನೀರು ಕೂಡ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ. ನೀರು ಬಿಡುವಂತೆ ತಮಿಳುನಾಡು ಕೇಳಿಲ್ಲ, ಕರ್ನಾಟಕಕ್ಕೆ ಯಾರೂ ನಿರ್ದೇಶನ ನೀಡಿಲ್ಲ ಎಂದು ಸಿಎಂ ಹೇಳಿದ್ದಾರೆ.


Share this with Friends

Related Post