Fri. Mar 6th, 2026

ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಸ್ಟಾರ್ ಚಂದ್ರು

Star Chandru
Share this with Friends

ಬೆಂಗಳೂರು, ಏ. 02, : ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಇಂದು ಸದಾಶಿವ ನಗರದಲ್ಲಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಮಾಡಿದರು.

ಎಸ್.ಎಂ.ಕೃಷ್ಣ ಅವರಿಗೆ ಹೂಮಾಲೆ ಹಾಕಿ, ಶಾಲು ಹೊದಿಸಿ ಸನ್ಮಾನಿಸಿದರು. ಉಭಯ ಕುಶಲೋಪರಿ ವಿಚಾರಿಸಿದ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಗಣಿಗ ರವಿ, ದಿನೇಶ್ ಗೂಳಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಹೊನ್ನಲಗೆರೆ ರಾಮಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಜತೆಗಿದ್ದರು.


Share this with Friends

Related Post