Tue. May 6th, 2025

ನಾಳೆ ಕನ್ನಡದ ಆಸ್ತಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜಯಂತಿ

Share this with Friends

ಮೈಸೂರು,ಜೂ.6: ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡದ ಆಸ್ತಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜಯಂತಿಯನ್ನು
ಜೂ.7ರಂದು‌ ಹಮ್ಮಿಕೊಳ್ಳಲಾಗಿದೆ.

ನಂಬರ್1149, ವಿಷ್ಣುವರ್ಧನ ರಸ್ತೆ, ಚಾಮರಾಜಪುರಂ ಟ್ರಸ್ಟ್ ನ ಕಚೇರಿಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಜಯಂತಿಯನ್ನು ಆಯೋಜಿಸಲಾಗಿದೆ ಎಂದು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮಾಜಿ ಅಧ್ಯಕ್ಷರಾದ ಡಾಕ್ಟರ್ ವೈ ಡಿ ರಾಜಣ್ಣ, ಚಂದ್ರಶೇಖರ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ,
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಭಾಗವಹಿಸಲಿದ್ದಾರೆ.


Share this with Friends

Related Post