Fri. Mar 6th, 2026

ರೈಲು ಪ್ರಯಾಣಿಕರೇ ಗಮನಿಸಿ: ಶತಾಬ್ದಿ ಸೇರಿ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆಯಾಗಿದೆ

Share this with Friends

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ–206ರಲ್ಲಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 128 ಮತ್ತು 2ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಬಿರೂರು–ತಾಳಗುಪ್ಪ ಹಾಗೂ ಅರಸೀಕೆರೆ–ಚಿಕ್ಕಜಾಜೂರು ನಡುವೆ ರೈಲ್ವೆ ‘ಲೈನ್ ಬ್ಲಾಕ್’ ಇರುವುದರಿಂದ. ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ರೈಲುಗಳ ಸಂಚಾರ ರದ್ದು:ತುಮಕೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (16567) ಫೆಬ್ರವರಿ 16, 19, 23, 24 ಹಾಗೂ ಮಾರ್ಚ್ 2 ರಿಂದ 5ರವರೆಗೆ ಸಂಚರಿಸುವುದಿಲ್ಲ. ಇದರ ವಿರುದ್ಧ ದಿಕ್ಕಿನ ಶಿವಮೊಗ್ಗ ಟೌನ್–ತುಮಕೂರು ಎಕ್ಸ್‌ಪ್ರೆಸ್ (16568) ರೈಲು ಫೆಬ್ರವರಿ 17, 20, 24, 25 ಹಾಗೂ ಮಾರ್ಚ್ 3 ರಿಂದ 6ರವರೆಗೆ ರದ್ದಾಗಲಿದೆ. ಹುಬ್ಬಳ್ಳಿ–ಅರಸೀಕೆರೆ ಎಕ್ಸ್‌ಪ್ರೆಸ್ (16214) ಫೆ. 23, 24 ಹಾಗೂ ಅರಸೀಕೆರೆ–ಹುಬ್ಬಳ್ಳಿ ಎಕ್ಸ್‌ಪ್ರೆಸ್ (16213) ಫೆ. 24, 25 ರಂದು ರದ್ದಾಗಿವೆ. ಕೆಎಸ್ಆರ್ ಬೆಂಗಳೂರು–ಶಿವಮೊಗ್ಗ-ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್ (12089/12090) ರೈಲುಗಳು ಫೆಬ್ರವರಿ 24 ಮತ್ತು 25 ರಂದು ರದ್ದಾಗಿವೆ.

ತಡವಾಗಿ ಹೊರಡುವ ರೈಲುಗಳು: ಶಿವಮೊಗ್ಗ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ (12090) ಫೆ. 17, 20 ಮತ್ತು ಮಾ. 3 ರಿಂದ 6ರವರೆಗೆ ಶಿವಮೊಗ್ಗದಿಂದ 75 ನಿಮಿಷ ತಡವಾಗಿ ಹೊರಡಲಿದೆ. ಅದೇ ರೀತಿ, ಅರಸೀಕೆರೆ–ಹುಬ್ಬಳ್ಳಿ ರೈಲು (16213) ಫೆ. 17, 20 ಮತ್ತು ಮಾ. 3 ರಿಂದ 6ರವರೆಗೆ ಅರಸೀಕೆರೆಯಿಂದ ನಿಗದಿತ ಸಮಯಕ್ಕಿಂತ 45 ನಿಮಿಷ ತಡವಾಗಿ ಪ್ರಯಾಣ ಆರಂಭಿಸಲಿದೆ.

ರೈಲುಗಳ ನಿಯಂತ್ರಣ: ಫೆಬ್ರವರಿ 25 ರಂದು ಕೆಎಸ್ಆರ್ ಬೆಂಗಳೂರು–ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ (20661) ಮಾರ್ಗಮಧ್ಯೆ 35 ನಿಮಿಷ ನಿಯಂತ್ರಣವಾಗಲಿದೆ. ತಾಳಗುಪ್ಪ– ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ (20652) ಫೆ. 24 ಮತ್ತು 25 ರಂದು 75 ನಿಮಿಷಗಳ ಕಾಲ ಹಾಗೂ ಚಿಕ್ಕಮಗಳೂರು–ಶಿವಮೊಗ್ಗ ಪ್ಯಾಸೆಂಜರ್ (56272) ರೈಲು ಅರ್ಧ ಗಂಟೆ ಕಾಲ ಮಾರ್ಗಮಧ್ಯೆ ವಿಳಂಬವಾಗಿ ಸಂಚರಿಸಲಿದ್ದು ಪ್ರಯಾಣಿಕರು ಗಮನಿಸಿ ಪ್ರಯಾಣದ ಸಿದ್ದತೆ ಮಾಡಿಕೊಳ್ಳುವಂತೆ ಮನವಿ ಮಾಡಿದೆ.


Share this with Friends

Related Post